ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ: ತನಿಖೆ ವಿವರ ಬಹಿರಂಗಪಡಿಸಲು ಆಗ್ರಹ

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ: ತನಿಖೆ ವಿವರ ಬಹಿರಂಗಪಡಿಸಲು ಆಗ್ರಹ

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ: ತನಿಖೆ ವಿವರ ಬಹಿರಂಗಪಡಿಸಲು ಆಗ್ರಹ

(ಕೃಪೆ : ವಾರ್ತಾಭಾರತಿ, ಗುರುವಾರ – ಮೇ -15-2014)

ಮಂಗಳೂರು, ಮೇ 14: ಧರ್ಮಸ್ಥಳ ಪಾಂಗಳ ನಿವಾಸಿ ಚಂದಪ್ಪ ಗೌಡ ಹಾಗೂ ಕುಸುಮಾವತಿಯವರ ಪುತ್ರಿ ಸೌಜನ್ಯಾಳ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಸಿಬಿಐ ತನಿಖೆ ಯಾವ ಹಂತದಲ್ಲಿದೆ ಎಂಬ ಬಗ್ಗೆ ಜನತೆಗೆ ಮಾಹಿತಿ ನೀಡುವಂತೆ ಒತ್ತಾಯಿಸಿ ಇಂದು ಕೇಮಾರು ಕ್ಷೇತ್ರದ ಸಾಂದೀಪನಿ ಸಾಧನಾಶ್ರಮದ ಈಶ ವಿಠ್ಠಲದಾಸ ಸ್ವಾಮೀಜಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ತನಿಖೆ ಶೀಘ್ರವೇ ಮುಗಿಸುವ ಜತೆಯಲ್ಲೇ ನೊಂದ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ಒದಗಿಸಬೇಕೆಂದೂ ಮನವಿಯಲ್ಲಿ ಈಶ ವಿಠ್ಠಲದಾಸ ಸ್ವಾಮೀಜಿ ಆಗ್ರಹಿಸಿದ್ದಾರೆ.

ಸಾರಿಕಾ ಹತ್ಯೆ ವರದಿಗೆ ಒತ್ತಾಯ
ಇದೇ ವೇಳೆ ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ಬಳಿಯ ಚಾರ್ವಾಕ ಎಂಬಲ್ಲಿನ ಸಾರಿಕಾ ಎಂಬ ಮಗುವನ್ನು ನಿಧಿಗಾಗಿ ಸ್ಥಳೀಯ ಕೆಲವರು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪ್ರಕರಣದ ಕುರಿತಾದ ತನಿಖೆ ಯಾವ ಹಂತದಲ್ಲಿದೆ ಎಂಬ ಬಗ್ಗೆಯೂ ಸಾರ್ವಜನಿಕರಿಗೆ ಮಾಹಿತಿ ಒದಗಿಸುವಂತೆ ಅವರು ಮನವಿಯಲ್ಲಿ ಆಗ್ರಹಿಸಿದ್ದಾರೆ. ಮೃತ ಸಾರಿಕಾ ಕುಟುಂಬಕ್ಕೆ ಸೂಕ್ತ ಪರಿಹಾರವನ್ನೂ ಒದಗಿಸ ಬೇಕೆಂದು ಅವರು ಒತ್ತಾಯಿಸಿದ್ದಾರೆ.

ನಿಮ್ಮ ಟಿಪ್ಪಣಿ ಬರೆಯಿರಿ